Home ›
ಹೇರೋಹಳ್ಳಿ ಕೆರೆ: ಕೊಳಕು ನೀರು ಕೊಳವೆ ಬಾವಿ ಮೂಲಕ ಪೂರೈಕೆ
Submitted by manjunar on Wed, 01/07/2009 - 18:22.
ಶುಚಿ ನೀರು: ಮಾನವ ಹಕ್ಕು ಅಲ್ಲವೇ? ಮನುಷ್ಯನಿಗೆ ಶುಚಿಯಾದ ನೀರು ಒದಗಿಸುವುದು ಕರ್ತವ್ಯ ಅಲ್ಲವೇ? ಈ ಉದ್ದೇಶದಿಂದ ಆರಂಭವಾಗುವ ನೀರು ಪೂರೈಕೆಯ ಖಾಸಗಿ ಸಂಸ್ಥೆಗಳು ಕಲ್ಮಶಯುಕ್ತ ನೀರನ್ನು ಜನರಿಗೆ ಪೂರೈಸುವುದು ಮಾನವ ಹಕ್ಕುಗಳ ಉಲ್ಲಂಘನೆ ಅಲ್ಲವೇ?

ನೈತಿಕವಾಗಿ ಖಂಡಿತವಾಗಿಯೂ ಇದು ಮಾನವನ ಹಕ್ಕು ಉಲ್ಲಂಘನೆಯೇ. ಟ್ಯಾಂಕರ್ನಲ್ಲಿ ಮನೆಗೆ ಬರುವ ನೀರಿನ ಮೂಲವನ್ನು ಅದನ್ನು ಖರೀದಿಸುವ ವ್ಯಕ್ತಿ ಕೇಳುವುದಿಲ್ಲ. ಕೇಳಿದರೆ, ಅದಕ್ಕೆ ಸಮರ್ಪಕ ಉತ್ತರ ದೊರೆಯುವುದೂ ಇಲ್ಲ. ಆದರೆ, ಇದನ್ನೇ ಬಂಡವಾಳವಾಗಿಸಿಕೊಂಡವರು ಕೆರೆಯ ಕೊಳಕು ನೀರನ್ನು ಅಕ್ರಮವಾಗಿಯೇ ತುಂಬಿಕೊಂಡು ಜನರಿಗೆ ಪೂರೈಸುತ್ತಿದ್ದಾರೆ. ಈ ನೀರಿಗೆ ಆಸರೆ ಆಗಿರುವುದು ಹೇರೋಹಳ್ಳಿ ಕೆರೆ.
ಬೆಂಗಳೂರು-ಮಾಗಡಿ ರಸ್ತೆಯಲ್ಲಿರುವ ಹೇರೋಹಳ್ಳಿ ಕೆರೆಯಲ್ಲಿ ಇಂತಹ ಅಕ್ರಮ ದಂಧೆ ನಡೆಯುತ್ತಿದೆ. ಈ ಕೆರೆ, ಸುತ್ತಲೂ ಸಾಕಷ್ಟು ಒತ್ತುವರಿಯಾಗಿದೆ. ಒಂದು ಸಣ್ಣ ಶೆಡ್ ಆಗಿ ಆರಂಭವಾದ ಕಾರ್ಖಾನೆ, ನಂತರ ಇದೇ ಕೆರೆಯನ್ನು ಮುಚ್ಚಿ ವಿಶಾಲವಾಗಿ ಬೆಳೆದುನಿಂತಿದೆ. ಅಷ್ಟೇ ಅಲ್ಲ, ತನ್ನ ರಾಸಾಯನಿಕ ಅಂಶಯುಕ್ತ ನೀರು ಹಾಗೂ ತ್ಯಾಜ್ಯವನ್ನು ಈ ಕೆರೆಗೇ ತುಂಬುತ್ತಿದೆ. ಇಂತಹ ವರ್ತನೆಯನ್ನು ಸ್ಥಳೀಯ ರಾಜಕೀಯ ಮುಖಂಡರು ಪ್ರೋತ್ಸಾಹಿಸುತ್ತಿದ್ದಾರೆ. ಯುವಕರು ಧ್ವನಿ ಎತ್ತದಂತೆ ತಡೆಯಾಗಿದ್ದಾರೆ.
ಹೇರೋಹಳ್ಳಿ ಕೆರೆಗೆ ಯಥೇಚ್ಛವಾಗಿ ಒಳಚರಂಡಿ ನೀರು ಹರಿಯುತ್ತಿದೆ. ಸುತ್ತಮುತ್ತಲಿರುವ ವಸತಿ ಪ್ರದೇಶ ಹಾಗೂ ಹೊಸ ಬಡಾವಣೆಗಳ ತ್ಯಾಜ್ಯ-ಕೊಳಕು ನೀರೆಲ್ಲ ಈ ಕೆರೆಗೆ ಹರಿಯಲು ಸೂಕ್ತ ಮಾರ್ಗವನ್ನು ಕಲ್ಪಿಸಲಾಗಿದೆ. ಕೆರೆಯ ಬದಿಯಲ್ಲಿ ಮೀನು ಮಾರಾಟವೂ ನಡೆಯುತ್ತದೆ. ಇದಕ್ಕೊಂದು ಗುಡಿಸಲೂ ಇದೆ. ಆದರೆ, ಇಂತಹ ಕಲ್ಮಶ ತುಂಬಿದ ನೀರಿನಲ್ಲಿ ಎಂತಹ ಮೀನು ಸಿಗಬಹುದು ನೀವೇ ಊಹಿಸಿ. ಆದ್ದರಿಂದಲೇ ಸ್ಥಳೀಯರು ಇಲ್ಲಿ ಮೀನು ಕೊಳ್ಳುವುದಿಲ್ಲ. ಹೊರಗಿನವರನ್ನು ಆಕರ್ಷಿಸುವುದೇ ಮಾರಾಟದ ಗಿಮ್ಮಿಕ್ಕು.
ಈ ಕೆರೆಯಲ್ಲಿ ತ್ಯಾಜ್ಯ ಸೇರಿದಂತೆ ಜೊಂಡು ಆವೃತವಾಗಿದೆ. ಪ್ಲಾಸ್ಟಿಕ್ ತ್ಯಾಜ್ಯದ ಜತೆಗೆ ರಸ್ತೆಗಳಿಂದ ಗಾಡಿಗೆ ತುಂಬುವ ಕಸ ಹಾಗೂ ಫ್ಯಾಕ್ಟರಿಗಳ ಎಲ್ಲ ತ್ಯಾಜ್ಯಕ್ಕೂ ಹೇರೋಹಳ್ಳಿ ಕೆರೆಯೇ ತಾಣ. ಕೆರೆಯ ದಡದ ಮೇಲಿನ ರಸ್ತೆಯಲ್ಲಿಯೇ ಹೇರೋಹಳ್ಳಿಗೆ ತೆರಳಬೇಕು. ಅದೇ ರಸ್ತೆಯ ಬದಿಯೆಲ್ಲ ಕಸದ ತಾಣ. ಈ ಮೂಲಕ ಕೆರೆಯನ್ನು ತುಂಬುವ ಸಂಚು.
ಹೇರೋಹಳ್ಳಿ ಕೆರೆಯ ಮತ್ತೊಂದು ದುರಂತವೆಂದರೆ, ಕೆರೆಗೇ ಬೋರ್ವೆಲ್ ಅಳವಡಿಸಲಾಗಿದೆ. ಮೂರ್ನಾಲ್ಕು ಬೋರ್ವೆಲ್ ಕೊರೆಯಲಾಗಿದ್ದು, ಅದರಿಂದ ನೀರೆತ್ತಲು ರಸ್ತೆಯಲ್ಲೇ ಪಂಪ್ಸೆಟ್ ಅಳವಡಿಸಲಾಗಿದೆ. ಇದು ಎಲ್ಲರಿಗೂ ಬಹಿರಂಗವಾಗಿಯೇ ಕಾಣುವ ಅಕ್ರಮ ವ್ಯವಸ್ಥೆ ಆಗಿದ್ದರೂ, ಈ ಬಗ್ಗೆ ಚಕಾರ ಎತ್ತುವರ್ಯಾರೂ ಇಲ್ಲ. ಈ ದಂಧೆಯಲ್ಲಿ ತೊಡಗಿರುವ ವ್ಯಕ್ತಿ ರಾಜಕೀಯ ಪ್ರಭಾವವನ್ನೂ ಹೊಂದಿರುವುದರಿಂದ, ಸ್ಥಳೀಯ ಯುವಕರ ಬಾಯಿ ಮುಚ್ಚಿಸುತ್ತಿದ್ದಾರೆ. ಈತ ಬರೀ ಅಕ್ರಮ ನೀರು ಸಾಗಣೆ ಅಷ್ಟೇ ಮಾಡುತ್ತಿಲ್ಲ. ಜನರ ಜೀವನದೊಂದಿಗೂ ಆಟವಾಡುತ್ತಿದ್ದಾನೆ.

ಕೆರೆಯಿಂದ ಬೋರ್ವೆಲ್ ಮೂಲಕ ನೀರು ಪಂಪ್ ಮಾಡಿ, ಅಲ್ಲಿಂದ ಟ್ಯಾಂಕರ್ ಮೂಲಕ ಮನೆಗಳಿಗೆ ಪೂರೈಸಲಾಗುತ್ತಿದೆ. ಇದು ಖಾಸಗಿ ನೀರು ಸರಬರಾಜು ಜಾಲ. ಇವರಿಗೆ ಜನರ ಸ್ವಾಸ್ಥ್ಯದ ಬಗ್ಗೆ ಪರಿವೇ ಇಲ್ಲ. ಇಂತಹ ನೀರನ್ನು ಜನರಿಗೆ ಪೂರೈಸುತ್ತಿದ್ದೇವೆಂಬ ಪಾಪಪ್ರಜ್ಞೆಯೂ ಇಲ್ಲ.
ಬೆಂಗಳೂರಿನಲ್ಲಿ ಕೆರೆಗಳನ್ನು ಯಾವ ರೀತಿ ಹಾಳು ಮಾಡುತ್ತಿದ್ದೇವೆ ಎಂದರೆ, ಕೆರೆಗೆ ಕೈ ಹಾಕುವ ಸಾಹಸ ಮಾಡದಂತಹ ಪರಿಸ್ಥಿತಿಯಲ್ಲಿದ್ದೇವೆ. ಆದರೆ, ಇಂತಹ ಕಲ್ಮಶ, ಕೊಳಕು ತುಂಬಿರುವ ಕೆರೆಯ ನೀರನ್ನೇ ಟ್ಯಾಂಕರ್ ಮೂಲಕ ಸಾಗಿಸಿ, ಹಣ ಮಾಡುವ ದಂಧೆ ಮಾತ್ರ ರಾಜಾರೋಷವಾಗಿ ನಡೆಯುತ್ತಿದೆ. ಇವರಿಗೆ ಜನರ ಆರೋಗ್ಯದ ಬಗ್ಗೆ ಕಾಳಜಿಯೇ ಇಲ್ಲ.
ಆರ್. ಮಂಜುನಾಥ್
- 279 reads
Email this page
Printer-friendly version
ಲೇಖಕರು
ಹೆಸರು
Manjunath R
ಪರಿಚಯ
ಪತ್ರಕರ್ತ
ವಿಜಯ ಕರ್ನಾಟಕದಲ್ಲಿ ಕಳೆದ 8 ವರ್ಷಗಳಿಂದ ಹಿರಿಯ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.
Home page:
http://keremanju.blogspot.com
http://arkavathi.com
ವಿಶೇಷ ಬರಹಗಳು
ಇತ್ತೀಚಿನ ಬ್ಲಾಗ್ ಬರಹಗಳು
- ಫೊಟೊ ಅಲ್ಬಮ್
- ಗಣಿಗಾರಿಕೆಯಲ್ಲಿ- ತಡೆಆಣೆಕಟ್ಟು (ಚೆಕ್-ಡ್ಯಾ೦)
- ಪ್ರಥಮ್ ಬುಕ್ಸ್ ""ಕಾವೇರಿ" ಪುಸ್ತಕದ ಬಿಡುಗಡೆ ಮತ್ತು "ನಿಮ್ಮ ನದಿಯನ್ನು ಕಾಪಾಡಿ ನೀರನ್ನು ಉಳಿಸಿ" ಆಂದೋಲನ
- ಇಲ್ಲಿ ‘ಕೊಳಚೆ ನೀರು ಕುಡಿಯುವ ನೀರು’!`ಪಲ್ಸಡ್ ಪ್ಲೇಟ್' ತಂತ್ರಜ್ಞಾನ ಎಸ್.ಡಿ.ಎಂ. ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಗಳ ಆವಿಷ್ಕಾರ.
- ಮಳೆ ಬಂದರೆ ಬೆಂಗಳೂರಿಗೆ ಭೇದಿ
- ಮಳೆ ಎಂದರೆ ಬಾಲ್ಯದ ನೆನಪು ಕಣಾ...
- ನಾವು ವೃತ್ತಿ/ಕೆಲಸ ಮಾಡುವಲ್ಲಿ ನೀರಿನ ಮಿತಬಳಕೆಯ ಬಗ್ಗೆ ಜಾಗೃತಿ ಹೇಗೆ ಮೂಡಿಸಬಹುದು ?
- ರೇಡಿಯೋದಲ್ಲಿ K2K
- ಮಡಿವಾಳ ಕೆರೆಯ ಉಳಿಸಿ - ಒಂದು ಕೂಗು
- ಕೆರೆ ಕರಗುವ ಸಮಯ: ನಿಮಗಿದೋ ಆಮಂತ್ರಣ
ಇತ್ತೀಚಿನ ಪ್ರತಿಕ್ರಿಯೆ
- Re: This is very nice in
1 week 5 days ago - Re: ಇಲ್ಲಿ ‘ಕೊಳಚೆ ನೀರು ...
2 weeks 5 days ago - Re: ‘ಇರುವೆ’; ಅಂತರ್ಜಲ ...
11 weeks 3 days ago - Re: ನಮ್ಮ ಮನೆಯ ತಾರಸಿ ಮೇಲೆ ...
11 weeks 6 days ago - Re: ‘ಕುಡಿಯಲು ಬಿಲ್ಕುಲ್ ...
14 weeks 3 days ago - Re: ಧಾರವಾಡದ ನೆಲ ನುಂಗಿ; ...
15 weeks 5 days ago - Re: ದೇಸಿ ತಂತ್ರಜ್ಞಾನದಿಂದ ...
17 weeks 12 hours ago - Re: ದೇಸಿ ತಂತ್ರಜ್ಞಾನದಿಂದ ...
17 weeks 4 days ago - Re: ಧಾರವಾಡದ ಮೂಕಾಂಬಿಕಾ ...
22 weeks 9 hours ago - Re: ಮಳೆ ಎಂದರೆ ಬಾಲ್ಯದ ...
22 weeks 6 days ago
| Subscribe to IWP Kannada list |
| Visit this group |


Post new comment