ಇನ್ನಷ್ಟು

“ನೀರಿನ ಕಲರವದ ದನಿಯು ನಮ್ಮ ತಂದೆಯ ತಂದೆಯದು. ನದಿಗಳು ನಮ್ಮ ಸಹೋದರರು. ಅವು ನಮ್ಮ ದಾಹವನ್ನು ಇಂಗಿಸುತ್ತವೆ. ನಮ್ಮ ದೋಣಿಗಳನ್ನು ಒಯ್ದು, ನಮ್ಮ ಮಕ್ಕಳಿಗೆ ಆಹಾರ ನೀಡುತ್ತವೆ. ನಿಮ್ಮ ಸಹೋದರನಿಗೆ ನೀಡುವ ಮಮತೆಯನ್ನೇ ನೀವು ನದಿಗಳಿಗೆ ನೀಡಬೇಕು – ಚೀಫ಼್ ಸಿಯಾಟಲ್, ಇಸವಿ ೧೮೫೪ “ನಾವು ನಮ್ಮ ಸಾಗರಗಳನ್ನು ರಕ್ಷಿಸಿದಾಗ, ನಮ್ಮ ಭವಿಷ್ಯದ ರಕ್ಷಣೆ ಮಾಡಿದಂತೆ ಎಂಬುದು ತಿಳಿದಿರುವ ಸಂಗತಿ.” - ಬಿಲ್ ಕ್ಲಿಂಟನ್ “ನೀರಿಗಿಂತ ಮೃದುವಾದುದು ಅಥವಾ ನಮ್ಯವಾದುದು ಬೇರೊಂದಿಲ್ಲ, ಆದರೆ ಅದನ್ನು ತಡೆಯುವವರೂ ಯಾರಿಲ್ಲ” - ಲವೊ ತ್ಸು, ಪುರಾತನ ಚೀನೀ ತತ್ವಜ್ಞಾನಿ ಹಾಗೂ ಬರಹಗಾರ ಜಗತ್ತಿನಲ್ಲಿರುವ ಸುಮಾರು ೯೭% ನೀರು ಉಪ್ಪು ನೀರು ಅಥವಾ ಕುಡಿಯಲು ಯೋಗ್ಯವಲ್ಲದ ನೀರಾಗಿದೆ. ಉಳಿದ ೨% ಮಂಜಿನ ಗಡ್ಡೆಗಳಲ್ಲಿ ಬಂಧಿಯಾಗಿದೆ. ಹಾಗಾಗಿ, ನಮ್ಮೆಲ್ಲ ಆಗತ್ಯಗಳಿಗೆ ಲಭ್ಯವಿರುವ ನೀರು ಕೇವಲ ೧%!

ನಮ್ಮ ನೆಲದಡಿಯ ಚರಿತ್ರೆ

17SM_JAIPUR_1_jpg_2698303gಜೈಪುರದಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯ ಒಂದು ಭಾಗದ ಅಡಿಯಲ್ಲಿ ಎರಡು ಪುರಾತನ ನೀರಿನ ಟ್ಯಾಂಕ್ ಗಳು ಇರುವುದು ಸಮೀಕ್ಷೆಗಳಿಂದ ಕಂಡುಬಂದಾಗ, ಒಟ್ಟಾರೆ ವಿನ್ಯಾಸದಲ್ಲಿ ಅದನ್ನು ಸೇರ್ಪಡೆ ಮಾಡಿ, ಸಂರಕ್ಷಿಸಲು ರಾಜಸ್ಥಾನ ಸರ್ಕಾರವು ಶೀಘ್ರ ಕ್ರಮ ಕೈಗೊಂಡಿತು.

ಅದನ್ನು ಕುರಿತಾದ ’ದ ಹಿಂದು’ ಆಂಗ್ಲ ಪತ್ರಿಕೆಯಲ್ಲಿ ಜನವರಿ ೧೭ರಂದು ಪ್ರಕಟವಾದ ಲೇಖನವನ್ನು ಇಲ್ಲಿ ಓದಿ http://www.thehindu.com/features/magazine/satish-nandgaonkar-on-ancient-water-tanks-discovered-during-a-metro-rail-project-in-jaipur/article8113763.ece

Share on FacebookTweet about this on TwitterShare on LinkedIn

Leave a Reply

Your email address will not be published. Required fields are marked *


*