ಇನ್ನಷ್ಟು

“ನೀರಿನ ಕಲರವದ ದನಿಯು ನಮ್ಮ ತಂದೆಯ ತಂದೆಯದು. ನದಿಗಳು ನಮ್ಮ ಸಹೋದರರು. ಅವು ನಮ್ಮ ದಾಹವನ್ನು ಇಂಗಿಸುತ್ತವೆ. ನಮ್ಮ ದೋಣಿಗಳನ್ನು ಒಯ್ದು, ನಮ್ಮ ಮಕ್ಕಳಿಗೆ ಆಹಾರ ನೀಡುತ್ತವೆ. ನಿಮ್ಮ ಸಹೋದರನಿಗೆ ನೀಡುವ ಮಮತೆಯನ್ನೇ ನೀವು ನದಿಗಳಿಗೆ ನೀಡಬೇಕು – ಚೀಫ಼್ ಸಿಯಾಟಲ್, ಇಸವಿ ೧೮೫೪ “ನಾವು ನಮ್ಮ ಸಾಗರಗಳನ್ನು ರಕ್ಷಿಸಿದಾಗ, ನಮ್ಮ ಭವಿಷ್ಯದ ರಕ್ಷಣೆ ಮಾಡಿದಂತೆ ಎಂಬುದು ತಿಳಿದಿರುವ ಸಂಗತಿ.” - ಬಿಲ್ ಕ್ಲಿಂಟನ್ “ನೀರಿಗಿಂತ ಮೃದುವಾದುದು ಅಥವಾ ನಮ್ಯವಾದುದು ಬೇರೊಂದಿಲ್ಲ, ಆದರೆ ಅದನ್ನು ತಡೆಯುವವರೂ ಯಾರಿಲ್ಲ” - ಲವೊ ತ್ಸು, ಪುರಾತನ ಚೀನೀ ತತ್ವಜ್ಞಾನಿ ಹಾಗೂ ಬರಹಗಾರ ಜಗತ್ತಿನಲ್ಲಿರುವ ಸುಮಾರು ೯೭% ನೀರು ಉಪ್ಪು ನೀರು ಅಥವಾ ಕುಡಿಯಲು ಯೋಗ್ಯವಲ್ಲದ ನೀರಾಗಿದೆ. ಉಳಿದ ೨% ಮಂಜಿನ ಗಡ್ಡೆಗಳಲ್ಲಿ ಬಂಧಿಯಾಗಿದೆ. ಹಾಗಾಗಿ, ನಮ್ಮೆಲ್ಲ ಆಗತ್ಯಗಳಿಗೆ ಲಭ್ಯವಿರುವ ನೀರು ಕೇವಲ ೧%!

ಕೆರೆನೋಟ – ಕೆರೆನೋಟ-70 ಆಗ ಹೀಗಿದ್ದವು… ಜೀವಂತ ಕೆರೆಗಳು! – 8

ಲಕ್ಷ್ಮಣರಾವ್ ಅವರು ನೀಡಿದ ವರದಿಯಲ್ಲಿ ಬೆಂಗಳೂರಿನ ಜೀವಂತ ಕೆರೆಗಳು ಹೇಗಿದ್ದವು ಎಂದು ಹೇಳಲಾಗಿದೆ. ಇದೀಗ ಜೀವಂತ ಕೆರೆಗಳ ಪರಿಸ್ಥಿತಿಯ ಹೇಗಿತ್ತು, ಅದನ್ನು ಏನು ಮಾಡಬಹುದು ಎಂಬ ಶಿಫಾರಸುಗಳನ್ನೂ ನೀಡಲಾಗಿದೆ. ಅಂತಹ 81 ಕೆರೆಗಳ ಪಟ್ಟಿಯ ವಿವರಣೆ ಹೀಗೆ ಸಾಗುತ್ತದೆ….

ಹೊಸೂರು ರಸ್ತೆ ಮತ್ತು ಮೈಸೂರು ರಸ್ತೆ ನಡುವಿನ ಕೆರೆಗಳು

  1. ಚುಂಚಘಟ್ಟ ಕೆರೆ

ಕನಕಪುರ ರಸ್ತೆ ಮತ್ತು ಬನ್ನೇರುಘಟ್ಟ ರಸ್ತೆಯ ನಡುವಿರುವ ಪ್ರಾಂತೀಯ ಉದ್ಯಾನದ ಸಮೀಪವಿರುವ ಚುಂಚಘಟ್ಟ ಕೆರೆ 8.23 ಹೆಕ್ಟೇರ್ ವಿಸ್ತೀರ್ಣದಲ್ಲಿದ್ದು, 268 ಸಂಖ್ಯೆಯಲ್ಲಿ ನೋಂದ05122014627ಣಿಯಾಗಿದೆ. ಈ ಕೆರೆ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದೆ. ಈ ಪ್ರದೇಶವನ್ನು ಜಲಮೂಲದೊಂದಿಗೆ ಪ್ರಾಂತೀಯ ಉದ್ಯಾನವನವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಈ ಕೆರೆ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.

  1. ಕೊತ್ತನೂರು ಕೆರೆ

ಕೊತ್ತನೂರು ಕೆರೆ ಬನ್ನೇರುಘಟ್ಟ ರಸ್ತೆ ಮತ್ತು ಕನಕಪುರ ರಸ್ತೆಯ ನಡುವಿರುವ ಪ್ರಾಂತೀಯ ಉದ್ಯಾನವನದ ಸಮೀಪ ಕೊತ್ತನೂರಿಗೆ ಅಂಟಿಕೊಂಡಂತಿದೆ. ಈ ಕೆರೆ 6.78 ಹೆಕ್ಟೇರ್ ಪ್ರದೇಶದಲ್ಲಿದ್ದು 267 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದೆ. ಕೆರೆಯ ತೀರದ ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು, ಕೆರೆಯ ಸುತ್ತಲೂ ವೃಕ್ಷವನವನ್ನು ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಸಲಹೆ ನೀಡಿದೆ. ಈ ಕೆರೆ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.

  1. ಬಿಳೇಕನಹಳ್ಳಿ ದಕ್ಷಿಣ ಭಾಗದ ಕೆರೆ

ಬನ್ನೇರುಘಟ್ಟ ರಸ್ತೆಗೆಹೊಂದಿಕೊಂಡಂತಿರುವ ಬಿಳೇಕನಹಳ್ಳಿಯ ದಕ್ಷಿಣ ಭಾಗದಲ್ಲಿರುವ ಈ ಕೆರೆ 4.53 ಹೆಕ್ಟೇರ್ ಪ್ರದೇಶದಲ್ಲಿದ್ದು 265ನೇ ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆ ಸಣ್ಣದಾಗಿದ್ದು, ಕೆರೆಯ ದಕ್ಷಿಣ ಭಾಗದಲ್ಲಿ ಅಂದರೆ ಪ್ರಸ್ತಾವಿತ ಪ್ರಾಂತೀಯ ಉದ್ಯಾನವನದ ಸಮೀಪ ಅಭಿವೃದ್ಧಿಯಾಗಿವೆ. ಈ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದೆ. ಈ ಕೆರೆಯ ಪ್ರದೇಶವನ್ನು ವೃಕ್ಷವನವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಸಲಹೆ ನೀಡಿದೆ. ಇದು ಅರಣ್ಯ ಇಲಾಖೆ ವಶದಲ್ಲಿದೆ.

  1. ಹುಳಿಮಾವು ಮತ್ತು ಅರಕೆರೆ ನಡುವಿನ ಕೆರೆ

ಹುಳಿಮಾವು ಮತ್ತು ಅರಕೆರೆ ಗ್ರಾಮಗಳ ನಡುವೆ ಈ ಕೆರೆ ಇದೆ. ಇದು ಬನ್ನೇರುಘಟ್ಟ ರಸ್ತೆಗೆ ಸಮೀಪವಿದೆ. ಈ 15.16 ಹೆಕ್ಟೇರ್ ಪ್ರದೇಶದಲ್ಲಿದ್ದು, 264ನೇ ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯ ದಕ್ಷಿಣ ಭಾಗದಲ್ಲಿ ಬೃಹತ್  ಕಲ್ಲಿನ ಗುಹೆ ಇದೆ. ಈ ಕೆರೆ ಪ್ರದೇಶವನ್ನು ಸಿಡಿಪಿಯಲ್ಲಿ ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಗುರುತಿಸಲಾಗಿದೆ. ಈ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು ಮತ್ತು ಜಲಮೂಲವನ್ನು ಉಳಿಸಿಕೊಳ್ಳಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಇದು ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ.

  1. ದೊರೆಸಾನಿಪಾಳ್ಯ ಕೆರೆ

ಬನ್ನೇರುಘಟ್ಟ ರಸ್ತೆಯ ಪಶ್ಚಿಮದತ್ತ ಮತ್ತು ಸಾರಕ್ಕಿ ಬಡಾವಣೆಯ ದಕ್ಷಿಣ ಭಾಗದಲ್ಲಿರುವ ದೊರೆಸಾನಿಪಾಳ್ಯ ಕೆರೆ 20.64 ಹೆಕ್ಟೇರ್ ವ್ಯಾಪ್ತಿ ಹೊಂದಿದೆ. ನೋಂದಣಿ ಸಂಖ್ಯೆ 273. ಈ ಕೆರೆಯ ಏರಿ ಉತ್ತಮ ಸ್ಥಿತಿಯಲ್ಲಿದೆ. ಅಚ್ಚುಕಟ್ಟು ಪ್ರದೇಶದಲ್ಲಿ ಕೆಲವು ಕಟ್ಟಡಗಳಿವೆ. ಈ ಕೆರೆಯ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂಸಿದಲಾಗಿದೆ. ಈ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು ಮತ್ತು ಜಲಮೂಲವನ್ನು ಉಳಿಸಿಕೊಳ್ಳಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಇದು ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ.Hebbala

  1. ಕಾಸ್ಮಿಖನ್ನ ಕೆರೆ, ಗುಬ್ಲಾಳ್

ಗುಬ್ಲಾಳ್ ಗೆ ಉತ್ತರ ಭಾಗದಲ್ಲಿ ಹಾಗೂ ಸುಬ್ರಮಣ್ಯಪುರ ಗ್ರಾಮದದ ರಸ್ತೆಗೆ ಹೊಂದಿಕೊಂಡಂತಿರುವ ಕಾಸ್ಮಿಖನ್ನ ಕೆರೆ 6.08 ಹೆಕ್ಟೇರ್ ಪ್ರದೇಶದಲ್ಲಿದ್ದು, 722 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂಸಿದಲಾಗಿದೆ. ಈ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು ಮತ್ತು ಜಲಮೂಲವನ್ನು ಉಳಿಸಿಕೊಂಡು ವೃಕ್ಷವವನವನ್ನು ಆಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಇದು ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ.

  1. ವೆಂಟಪ್ಪನಕೆರೆ, ಉತ್ತರಹಳ್ಳಿ

ಉತ್ತರಹಳ್ಳಿ ಗ್ರಾಮದ ಸಮೀಪವಿರುವ ಈ ಕೆರೆ7.10 ಹೆಕ್ಟೇರ್ ಪ್ರದೇಶದಲ್ಲಿದ್ದು, 7221 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂಸಿದಲಾಗಿದೆ. ಈ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು ಮತ್ತು ಜಲಮೂಲವನ್ನು ಉಳಿಸಿಕೊಂಡು ವೃಕ್ಷವವನವನ್ನು ಆಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಇದು ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ.

ಲಕ್ಷ್ಮಣರಾವ್ ವರದಿಯಲ್ಲಿನ ಜೀವಂತ ಕೆರೆಗಳಲ್ಲಿ ಬಳ್ಳಾರಿ ರಸ್ತೆ ಮತ್ತು ಹಳೇ ಮದ್ರಾಸ್ ರಸ್ತೆ ಭಾಗ ಹಾಗೂ ಹಳೇ ಮದ್ರಾಸ್ ರಸ್ತೆ ಮತ್ತು ಹೊಸೂರು ರಸ್ತೆ ಮಧ್ಯಭಾಗದಲ್ಲಿರುವ ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಯ ಕೆರೆಗಳ ಮಾಹಿತಿಯನ್ನು ನೀಡಲಾಯಿತು. ಈಗ ಹೊಸೂರು ರಸ್ತೆ ಮತ್ತು ಮೈಸೂರು ರಸ್ತೆ ನಡುವಿನ ಕೆರೆಗಳ ವಿವರ ನೀಡಲಾಗುತ್ತಿದೆ. ಮುಂದಿನ ನೋಟದಲ್ಲಿ ಇನ್ನಷ್ಟು ಕೆರೆಗಳ ಮಾಹಿತಿ ನೀಡಲಾಗುತ್ತದೆ.

 (ಮುಂದುವರಿಯಲಿದೆ)

ಚಿತ್ರ-ಲೇಖನ: ಕೆರೆ ಮಂಜುನಾಥ್

Share on FacebookTweet about this on TwitterShare on LinkedIn

Leave a Reply

Your email address will not be published. Required fields are marked *


*