ಕೆರೆನೋಟ-71 ಆಗ ಹೀಗಿದ್ದವು… ಜೀವಂತ ಕೆರೆಗಳು! -9
ಲಕ್ಷ್ಮಣರಾವ್ ಅವರು ನೀಡಿದ ವರದಿಯಲ್ಲಿ ಬೆಂಗಳೂರಿನ ಜೀವಂತ ಕೆರೆಗಳು ಹೇಗಿದ್ದವು ಎಂದು ಹೇಳಲಾಗಿದೆ. ಇದೀಗ ಜೀವಂತ ಕೆರೆಗಳ ಪರಿಸ್ಥಿತಿಯ ಹೇಗಿತ್ತು, ಅದನ್ನು ಏನು ಮಾಡಬಹುದು ಎಂಬ ಶಿಫಾರಸುಗಳನ್ನೂ ನೀಡಲಾಗಿದೆ. ಅಂತಹ 81 ಕೆರೆಗಳ ಪಟ್ಟಿಯ ವಿವರಣೆ ಹೀಗೆ ಸಾಗುತ್ತದೆ….
ಹೊಸೂರು ರಸ್ತೆ ಮತ್ತು ಮೈಸೂರು ರಸ್ತೆ ನಡುವಿನ ಕೆರೆಗಳು
- ದೊರೆ ಕೆರೆ, ಉತ್ತರಹಳ್ಳಿ
ಉತ್ತರಹಳ್ಳಿಯಲ್ಲಿರುವ ದೊರೆ ಕೆರೆ 11.61 ಹೆಕ್ಟೇರ್್ ಪ್ರದೇಶದಲ್ಲಿದ್ದು, 720 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂಸಿದಲಾಗಿದೆ. ಈ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು ಮತ್ತು ಜಲಮೂಲವನ್ನು ಉಳಿಸಿಕೊಂಡು ವೃಕ್ಷವವನವನ್ನು ಆಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಇದು ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ.
- ಜನಾರ್ದನ ಕೆರೆ, ವಸಂತಪುರ
ವಸಂತಪುರದ ಪೂರ್ವದಿಕ್ಕಿನಲ್ಲಿರುವ ಜನಾರ್ದನಕೆರೆ, 2.58 ಹೆಕ್ಟೇರ್್ ಪ್ರದೇಶಹೊಂದಿದ್ದು, 718 ಸಂಖ್ಯೆಯಲ್ಲಿ ನೋಂದಣಿಯಾಗಿರುವ ಕೆರೆ ಚಿಕ್ಕದಾಗಿದೆ. ಈ ಕೆರೆಯ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂಸಿದಲಾಗಿದೆ. ಈ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು ಮತ್ತು ಜಲಮೂಲವನ್ನು ಉಳಿಸಿಕೊಂಡು ವೃಕ್ಷವವನವನ್ನು ಆಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಇದು ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ.
- ಅಣ್ಣಪ್ಪನ ಕೆರೆ
ಕನಕಪುರ ರಸ್ತೆ ಹೊಂದಿಕೊಂಡಂತಿರುವ ಯಲಚೇನಹಳ್ಳಿ ಬಳಿ ಇರುವ ಅಣ್ಣಪ್ಪನ ಕೆರೆ 2.90 ಹೆಕ್ಟೇರ್ ಪ್ರದೇಶದಲ್ಲಿದ್ದು, 717 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂಸಿದಲಾಗಿದೆ. ಈ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು ಮತ್ತು ಜಲಮೂಲವನ್ನು ಉಳಿಸಿಕೊಂಡು ವೃಕ್ಷವವನವನ್ನು ಆಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಇದು ಅರಣ್ಯ ಇಲಾಖೆ ಸುಪರ್ದಿಯಲ್ಲಿದೆ.
- ಗೋವಿಂದನಾಯ್ಕನ ಕೆರೆ, ಜರಗನಹಳ್ಳಿ
ಜರಗನಹಳ್ಳಿ ಪೂರ್ವ ದಿಕ್ಕಿನಲ್ಲಿರುವ, ಕನಕಪುರ ರಸ್ತೆಗೆ ಸಮೀಪವಿರುವ ಗೋವಿಂದನಾಯ್ಕನ ಕೆರೆ 32.25 ಹೆಕ್ಟೇರ್ ವ್ಯಾಪ್ತಿ ಹೊಂದಿದೆ. 715 ಸಂಖ್ಯೆಯಲ್ಲಿ ನೋಂದಣಿಯಾಗಿರುವ ಈ ಕೆರೆ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದೆ. ಕೆರೆಯ ತೀರದ ಪ್ರದೇಶದಲ್ಲಿ ಸಸಿಗಳನ್ನು ನಡೆಬೇಕು. ಜಲಮೂಲವನ್ನು ಉಳಿಸಿಕೊಳ್ಳಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಅರಣ್ಯ ಇಲಾಖೆ, ಬಿಡಬ್ಲ್ಯುಎಸ್.ಎಸ್.ಬಿ. ಈ ಕೆರೆಯ ಸುಪರ್ದಿ ಹೊಂದಿವೆ.
- ಮೊಗಕೆರೆ, ಉತ್ತರಹಳ್ಳಿ
ಉತ್ತರಹಳ್ಳಿ-ಕೆಂಗೇರಿ ರಸ್ತೆಯ ಉತ್ತರಹಳ್ಳಿ ಸಮೀಪವಿರುವ ಮೊಗಕೆರೆ 7.10 ಹೆಕ್ಟೇರ್ ಪ್ರದೇಶದಲ್ಲಿದ್ದು, ಸಂಖ್ಯೆ 712ರಲ್ಲಿ ನೋಂದಣಿಯಾಗಿದೆ. ಈ ಕೆರೆಯನ್ನೂ ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದೆ. ಈ ಕೆರೆಯ ತೀರದ ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು. ಸುತ್ತಮುತ್ತಲಿನ ಪ್ರದೇಶ ಅಭಿವೃದ್ಧಿಯಾಗುವ ಸಂದರ್ಭದಲ್ಲಿ ಈ ಕೆರೆಯ ಪ್ರದೇಸವನ್ನು ವೃಕ್ಷವನವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಸಲಹೆ ನೀಡಿದೆ. ಈ ಕೆರೆ ಅರಣ್ಯ ಇಲಾಖೆ ವಶದಲ್ಲಿದೆ.
- ದೊಡ್ಡಕೆರೆ, ಸಾಕೇರಹಳ್ಳಿ
ಬನಶಂಕರಿ 3ನೇ ಘಟ್ಟದ ಬಡಾವಣೆಗೆ ಹೊಂದಿಕೊಂಡಂತಿರುವ ಹೊಸಕೆರೆಹಳ್ಳಿ ಸಮೀಪವಿರುವ ದೊಡ್ಡಕೆರೆ 23.22 ಹೆಕ್ಟೇರ್ ಪ್ರದೇಶದಲ್ಲಿದೆ. ಈ ಕೆರೆ 708 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯನ್ನು ಪ್ರಾಂತೀಯ ಉದ್ಯಾನವನ ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದೆ. ಈ ಕೆರೆಯನ್ನು ಪ್ರಾಂತೀಯ ಉದ್ಯಾನವನವನ್ನಾಗಿ ಮಾಡುವುದರ ಜೊತೆಗೆ ಜಲಮೂಲವನ್ನು ಉಳಿಸಿಕೊಳ್ಳಬೇಕು ಎಂದು ಸಮಿತಿ ಸಲಹೆ ನೀಡಿದೆ. ಅರಣ್ಯ ಇಲಾಖೆ ಕೆರೆಯ ಮಾಲೀಕತ್ವ ಹೊಂದಿದೆ.
ಲಕ್ಷ್ಮಣರಾವ್ ವರದಿಯಲ್ಲಿನ ಜೀವಂತ ಕೆರೆಗಳಲ್ಲಿ ಬಳ್ಳಾರಿ ರಸ್ತೆ ಮತ್ತು ಹಳೇ ಮದ್ರಾಸ್ ರಸ್ತೆ ಭಾಗ ಹಾಗೂ ಹಳೇ ಮದ್ರಾಸ್ ರಸ್ತೆ ಮತ್ತು ಹೊಸೂರು ರಸ್ತೆ ಮಧ್ಯಭಾಗದಲ್ಲಿರುವ ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಯ ಕೆರೆಗಳ ಮಾಹಿತಿಯನ್ನು ನೀಡಲಾಯಿತು. ಈಗ ಹೊಸೂರು ರಸ್ತೆ ಮತ್ತು ಮೈಸೂರು ರಸ್ತೆ ನಡುವಿನ ಕೆರೆಗಳ ವಿವರ ನೀಡಲಾಗುತ್ತಿದೆ. ಮುಂದಿನ ನೋಟದಲ್ಲಿ ಇನ್ನಷ್ಟು ಕೆರೆಗಳ ಮಾಹಿತಿ ನೀಡಲಾಗುತ್ತದೆ.
(ಮುಂದುವರಿಯಲಿದೆ)
ಚಿತ್ರ-ಲೇಖನ: ಕೆರೆ ಮಂಜುನಾಥ್