ಕೆರೆನೋಟ-72 ಆಗ ಹೀಗಿದ್ದವು… ಜೀವಂತ ಕೆರೆಗಳು! -10
ಲಕ್ಷ್ಮಣರಾವ್ ಅವರು ನೀಡಿದ ವರದಿಯಲ್ಲಿ ಬೆಂಗಳೂರಿನ ಜೀವಂತ ಕೆರೆಗಳು ಹೇಗಿದ್ದವು ಎಂದು ಹೇಳಲಾಗಿದೆ. ಇದೀಗ ಜೀವಂತ ಕೆರೆಗಳ ಪರಿಸ್ಥಿತಿಯ ಹೇಗಿತ್ತು, ಅದನ್ನು ಏನು ಮಾಡಬಹುದು ಎಂಬ ಶಿಫಾರಸುಗಳನ್ನೂ ನೀಡಲಾಗಿದೆ. ಅಂತಹ 81 ಕೆರೆಗಳ ಪಟ್ಟಿಯ ವಿವರಣೆ ಹೀಗೆ ಸಾಗುತ್ತದೆ….
ಹೊಸೂರು ರಸ್ತೆ ಮತ್ತು ಮೈಸೂರು ರಸ್ತೆ ನಡುವಿನ ಕೆರೆಗಳು
- ಚಿಕ್ಕಲಸಂದ್ರ ಕೆರೆ
ಬನಶಂಕರಿ ಮೂರನೇ ಹಂತದ ಬಡಾವಣೆಯಲ್ಲಿರುವ ಚಿಕ್ಕಲಸಂದ್ರ ಕೆರೆ 5.16 ಹೆಕ್ಟೇರ್ ವ್ಯಾಪ್ತಿಯಲ್ಲಿದ್ದು, 706 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯ ವ್ಯಾಪ್ತಿಯನ್ನು ಸಿಡಿಪಿಯಲ್ಲಿ ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ನಮೂದಿಸಲಾಗಿದೆ. ಈ ಕೆರೆಯ ಪ್ರದೇಶದಲ್ಲಿ ವೃಕ್ಷವನವನ್ನು ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಈ ಕೆರೆ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.
- ಇಟ್ಟಮಡು ಕೆರೆ
ಬನಶಂಕರಿಯ ಮೂರನೇ ಹಂತದ ಬಡಾವಣೆಯಲ್ಲಿರುವ ಹಾಗೂ ಇಟ್ಟುಮಡು ಗ್ರಾಮದ ಅಂಚಿನಲ್ಲಿರುವ ಇಟ್ಟುಮಡು ಕೆರೆ 3.46 ಹೆಕ್ಟೇರ್ ಪ್ರದೇಶದಲ್ಲಿದೆ. 707 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯ ವ್ಯಾಪ್ತಿಯನ್ನು ಸಿಡಿಪಿಯಲ್ಲಿ ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ನಮೂದಿಸಲಾಗಿದೆ. ಈ ಕೆರೆಯ ಪ್ರದೇಶದಲ್ಲಿ ವೃಕ್ಷವನವನ್ನು ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಈ ಕೆರೆ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.
- ಮೈಲಸಂದ್ರ ಕೆರೆ-2
ಮೈಸೂರು ರಸ್ತೆಯ ಕೆಂಗೇರಿ ದಕ್ಷಿಣ ಭಾಗದ ಒಳಭಾಗದಲ್ಲಿರುವ ಮೈಲಸಂದ್ರಕ್ಕೆ ಆಣತಿ ದೂರದಲ್ಲಿರುವ ಮೈಲಸಂದ್ರ ಕೆರೆ-2, 11.94 ಹೆಕ್ಟೇರ್ ವ್ಯಾಪ್ತಿಯಲ್ಲಿದೆ. ಈ ಕೆರೆ 723 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯ ವ್ಯಾಪ್ತಿಯನ್ನು ಸಿಡಿಪಿಯಲ್ಲಿ ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ನಮೂದಿಸಲಾಗಿದೆ. ಈ ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ ಸಸಿಗಳನ್ನು ನಡೆಬೇಕು. ಮುಂದಿನ ದಿನಗಳಲ್ಲಿ ಈ ಪ್ರದೇಶದಲ್ಲಿ ವೃಕ್ಷವನವನ್ನು ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಈ ಕೆರೆ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.
- ಬಾಚಿಕೆರೆ ಕೆಂಚೇನಹಳ್ಳಿ
ಕೆಂಚೇನಹಳ್ಳಿಗೆ ಹೊಂದಿಕೊಂಡಂತಿರುವ ಬಾಚಿಕೆರೆ-ಕೆಂಚೇನಹಳ್ಳಿ ಕೆರೆ ಚಿಕ್ಕದಾಗಿದೆ. 1.61 ಹೆಕ್ಟೇರ್ ಪ್ರದೇಶದಲ್ಲಿದ್ದು 711 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯ ವ್ಯಾಪ್ತಿಯನ್ನು ಸಿಡಿಪಿಯಲ್ಲಿ ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ನಮೂದಿಸಲಾಗಿದೆ. ಈ ಕೆರೆಯ ಪ್ರದೇಶದಲ್ಲಿ ವೃಕ್ಷವನವನ್ನು ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಈ ಕೆರೆ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.
- ಊರು ಮುಂದಿನ ಕೆರೆ-ಹಲಗೇವಡೇರಹಳ್ಳಿ
ಹಲಗೇವಡೇರಹಳ್ಳಿಯ ಉತ್ತರ ದಿಕ್ಕಿನಲ್ಲಿರುವ ಊರು ಮುಂದಿನ ಕೆರೆ ಚಿಕ್ಕದಾಗಿದೆ. ಈ ಕೆರೆ 710 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯ ವ್ಯಾಪ್ತಿಯನ್ನು ಸಿಡಿಪಿಯಲ್ಲಿ ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ನಮೂದಿಸಲಾಗಿದೆ. ಈ ಕೆರೆಯ ಪ್ರದೇಶದಲ್ಲಿ ವೃಕ್ಷವನವನ್ನು ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಈ ಕೆರೆ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದೆ.
ಲಕ್ಷ್ಮಣರಾವ್ ವರದಿಯಲ್ಲಿನ ಜೀವಂತ ಕೆರೆಗಳಲ್ಲಿ ಬಳ್ಳಾರಿ ರಸ್ತೆ ಮತ್ತು ಹಳೇ ಮದ್ರಾಸ್ ರಸ್ತೆ ಭಾಗ ಹಾಗೂ ಹಳೇ ಮದ್ರಾಸ್ ರಸ್ತೆ ಮತ್ತು ಹೊಸೂರು ರಸ್ತೆ ಮಧ್ಯಭಾಗದಲ್ಲಿರುವ ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಯ ಕೆರೆಗಳ ಮಾಹಿತಿಯನ್ನು ನೀಡಲಾಯಿತು. ಈಗ ಹೊಸೂರು ರಸ್ತೆ ಮತ್ತು ಮೈಸೂರು ರಸ್ತೆ ನಡುವಿನ ಕೆರೆಗಳ ವಿವರ ನೀಡಲಾಗುತ್ತಿದೆ. ಮುಂದಿನ ನೋಟದಲ್ಲಿ ಇನ್ನಷ್ಟು ಕೆರೆಗಳ ಮಾಹಿತಿ ನೀಡಲಾಗುತ್ತದೆ.
(ಮುಂದುವರಿಯಲಿದೆ)
ಚಿತ್ರ-ಲೇಖನ: ಕೆರೆ ಮಂಜುನಾಥ್