ಇನ್ನಷ್ಟು

“ನೀರಿನ ಕಲರವದ ದನಿಯು ನಮ್ಮ ತಂದೆಯ ತಂದೆಯದು. ನದಿಗಳು ನಮ್ಮ ಸಹೋದರರು. ಅವು ನಮ್ಮ ದಾಹವನ್ನು ಇಂಗಿಸುತ್ತವೆ. ನಮ್ಮ ದೋಣಿಗಳನ್ನು ಒಯ್ದು, ನಮ್ಮ ಮಕ್ಕಳಿಗೆ ಆಹಾರ ನೀಡುತ್ತವೆ. ನಿಮ್ಮ ಸಹೋದರನಿಗೆ ನೀಡುವ ಮಮತೆಯನ್ನೇ ನೀವು ನದಿಗಳಿಗೆ ನೀಡಬೇಕು – ಚೀಫ಼್ ಸಿಯಾಟಲ್, ಇಸವಿ ೧೮೫೪ “ನಾವು ನಮ್ಮ ಸಾಗರಗಳನ್ನು ರಕ್ಷಿಸಿದಾಗ, ನಮ್ಮ ಭವಿಷ್ಯದ ರಕ್ಷಣೆ ಮಾಡಿದಂತೆ ಎಂಬುದು ತಿಳಿದಿರುವ ಸಂಗತಿ.” - ಬಿಲ್ ಕ್ಲಿಂಟನ್ “ನೀರಿಗಿಂತ ಮೃದುವಾದುದು ಅಥವಾ ನಮ್ಯವಾದುದು ಬೇರೊಂದಿಲ್ಲ, ಆದರೆ ಅದನ್ನು ತಡೆಯುವವರೂ ಯಾರಿಲ್ಲ” - ಲವೊ ತ್ಸು, ಪುರಾತನ ಚೀನೀ ತತ್ವಜ್ಞಾನಿ ಹಾಗೂ ಬರಹಗಾರ ಜಗತ್ತಿನಲ್ಲಿರುವ ಸುಮಾರು ೯೭% ನೀರು ಉಪ್ಪು ನೀರು ಅಥವಾ ಕುಡಿಯಲು ಯೋಗ್ಯವಲ್ಲದ ನೀರಾಗಿದೆ. ಉಳಿದ ೨% ಮಂಜಿನ ಗಡ್ಡೆಗಳಲ್ಲಿ ಬಂಧಿಯಾಗಿದೆ. ಹಾಗಾಗಿ, ನಮ್ಮೆಲ್ಲ ಆಗತ್ಯಗಳಿಗೆ ಲಭ್ಯವಿರುವ ನೀರು ಕೇವಲ ೧%!

ಕೆರೆನೋಟ-77 ಆಗ ಹೀಗಿದ್ದವು… ಜೀವಂತ ಕೆರೆಗಳು! -15

ಲಕ್ಷ್ಮಣರಾವ್ ಅವರು ನೀಡಿದ ವರದಿಯಲ್ಲಿ ಬೆಂಗಳೂರಿನ ಜೀವಂತ ಕೆರೆಗಳು ಹೇಗಿದ್ದವು ಎಂದು ಹೇಳಲಾಗಿದೆ. ಇದೀಗ ಜೀವಂತ ಕೆರೆಗಳ ಪರಿಸ್ಥಿತಿಯ ಹೇಗಿತ್ತು, ಅದನ್ನು ಏನು ಮಾಡಬಹುದು ಎಂಬ ಶಿಫಾರಸುಗಳನ್ನೂ ನೀಡಲಾಗಿದೆ. ಅಂತಹ 81 ಕೆರೆಗಳ ಪಟ್ಟಿಯ ವಿವರಣೆ ಹೀಗೆ ಸಾಗುತ್ತದೆ….

ತುಮಕೂರು ರಸ್ತೆ ಮತ್ತು ಬಳ್ಳಾರಿ ರಸ್ತೆ ನಡುವಿನ ಕೆರೆಗಳು

  1. ಕಾಮಗೊಂಡನಹಳ್ಳಿ ಕೆರೆ

ತುಮಕೂರು ರೈಲು ಹಳಿಯ ಸಮೀಪ ಹಾಗೂ ಎಚ್.ಟಿ.ಆಂಸಿಲರಿ ಇಂಡಸ್ಟ್ರೀಸ್ ನ ಪಶ್ಚಿಮ ಭಾಗದಲ್ಲಿರುವ ಕಾಮkere maju articleಗೊಂಡನಹಳ್ಳಿ ಕೆರೆ, 11.29 ಹೆಕ್ಟೇರ್ ಪ್ರದೇಶದಲ್ಲಿದೆ. 508 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆಯ ಭಾಗಶಃ ಭಾಗವನ್ನು ವಸತಿ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದ್ದು, ವಿವರಗಳನ್ನು ತೋರಿಸಿಲ್ಲ.  ಈ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು. ಈ ಕೆರೆಯ ಅಭಿವೃದ್ಧಿ ಜೊತೆಗೆ ವೃಕ್ಷವನ ಅಭಿವೃದ್ಧಿಪಡಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಈ ಕೆರೆ ಅರಣ್ಯ ಇಲಾಖೆ ವಶದಲ್ಲಿದೆ.

  1. ಚಿಕ್ಕಬೆಟ್ಟಹಳ್ಳಿ ಕೆರೆ

ಚಿಕ್ಕಬೆಟ್ಟಹಳ್ಳಿ ಉತ್ತರ ಭಾಗದಲ್ಲಿರುವ ಚಿಕ್ಕಬೆಟ್ಟಹಳ್ಳಿ ಕೆರೆ 4.60 ಹೆಕ್ಟೇರ್ ಪ್ರದೇಶದಲ್ಲಿದ್ದು, 497 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆ ಪ್ರದೇಶ ವಸತಿ ವಲಯ ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದ್ದರೂ, ವಿವರಗಳನ್ನು ತೋರಿಸಿಲ್ಲ. ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು. ಜಲಮೂಲವನ್ನು ಸಂರಕ್ಷಿಸಬೇಕು. ಬಿಡಿಎ ಬಡಾವಣೆಯಲ್ಲಿ ಉದ್ಯಾನವನ ನಿರ್ಮಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಅರಣ್ಯ ಇಲಾಖೆ ಮತ್ತು ಬಿಡಿಎ ಜಂಟಿ ಸುಪರ್ದಿಯಲ್ಲಿದೆ ಈ ಕೆರೆ.

  1. ಹೆಬ್ಬಾಳ ಕೆರೆ

ಬಳ್ಳಾರಿ ರಸ್ತೆಗೆ ಹೊಂದಿಕೊಂಡಂತಿದೆ ಈ ಹೆಬ್ಬಾಳ ಕೆರೆ 64.50 ಹೆಕ್ಟೇರ್ ಪ್ರದೇಶದಲ್ಲಿದ್ದು, 353 ಸಂಖ್ಯೆಯ ನೋಂದಣಿ ಹೊಂದಿದೆ. ಈ ಕೆರೆಯಲ್ಲಿರುವ ನೀರು ಜಲಕಳೆಯಿಂದ ಮುಚ್ಚಿಕೊಂಡಿದೆ. ಇದನ್ನು ನೀರಾವರಿಗೆ ಬಳಸಲಾಗುತ್ತಿದೆ. ಈ ಕೆರೆಯ ದಕ್ಷಿಣ ಭಾಗದಲ್ಲಿ ಅರಣ್ಯ ಇಲಾಖೆ ಉತ್ತಮವಾದ ನರ್ಸರಿಯನ್ನು ಅಭಿವೃದ್ಧಿಪಡಿಸಿದೆ. ಈ ಕೆರೆಯನ್ನು ಪ್ರಾದೇಶಿಕ ಉದ್ಯಾನವನ ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದೆ. ಪ್ರಾದೇಶಿಕ ಉದ್ಯಾನವನ ಮತ್ತು ಅಚ್ಚುಕಟ್ಟು ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು. ಒತ್ತುವರಿಯನ್ನು ತೆರವುಗೊಳಿಸಬೇಕು. ಜಲಕಳೆಯನ್ನು ಸಣ್ಣ ನೀರಾವರಿ ಇಲಾಖೆ ನಿವಾರಿಸಬೇಕು. ಕೆ.ಎಸ್.ಟಿ.ಸಿ.ಸಿ ಇಲ್ಲಿ ಪ್ರವಾಸಿ ಸೌಲಭ್ಯ ಕಲ್ಪಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಈ ಕೆರೆಅರಣ್ಯ ಇಲಾಖೆ, ಕೆ.ಎಸ್.ಟಿ.ಡಿ.ಸಿ ಮತ್ತು ಸಣ್ಣ ನೀರಾವರಿ ಇಲಾಖೆ ಸುಪರ್ದಿಯಲ್ಲಿದೆ.

  1. ಗ್ರಾಮದ ಕೆರೆ, ಅಲ್ಲಾಳಸಂದ್ರ

ಯಲಹಂಕ ಉಪನಗರದ ದಕ್ಷಿಣ ಭಾಗದಲ್ಲಿರುವ ಅಲ್ಲಾಳಸಂದ್ರ ಕೆರೆ 17.42 ಹೆಕ್ಟೇರ್ ಪ್ರದೇಶದಲ್ಲಿದ್ದು, 356 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಹಾಗೂ ಜಲಮೂಲ ಉಳಿಸಿಕೊಳ್ಳಬೇಕು ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದೆ. ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು. ಜಲಮೂಲವನ್ನು ಸಂರಕ್ಷಿಸಿಕೊಳ್ಳಬೇಕು. ಕೆ.ಎಸ್.ಟಿ.ಡಿ.ಸಿಯಿಂದ ಪ್ರವಾಸೋದ್ಯಮ ಸೌಲಭ್ಯ ಕಲ್ಪಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಅರಣ್ಯ ಇಲಾಖೆ ಮತ್ತು ಕೆ.ಎಸ್.ಟಿ.ಡಿ.ಸಿ ಜಂಟಿ ಸುಪರ್ದಿ ಹೊಂದಿವೆ.

  1. ಪುಟ್ಟೇನಹಳ್ಳಿ ಕೆರೆ

ದೊಡ್ಡಬಳ್ಳಾಪುರ ರಸ್ತೆಗೆ ಹೊಂದಿಕೊಂಡಂತಿರುವ ಮತ್ತು ಯಲಹಂಕ ಉಪನಗರದ ಉತ್ತರ ಭಾಗದಲ್ಲಿರುವ ಪುಟ್ಟೇನಹಳ್ಳಿ ಕೆರೆ 8.87 ಹೆಕ್ಟೇರ್ ಪ್ರದೇಶದಲ್ಲಿದ್ದು, 361 ಸಂಖ್ಯೆಯಲ್ಲಿ ನೋಂದಣಿಯಾಗಿದೆ. ಈ ಕೆರೆ ಪ್ರದೇಶವನ್ನು ಉದ್ಯಾನವನ ಮತ್ತು ತೆರೆದ ಪ್ರದೇಶ ಎಂದು ಸಿಡಿಪಿಯಲ್ಲಿ ನಮೂದಿಸಲಾಗಿದೆ. ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ ಸಸಿಗಳನ್ನು ನೆಡಬೇಕು. ಜಲಮೂಲವನ್ನು ಸಂರಕ್ಷಿಸಿಕೊಂಡು, ವೃಕ್ಷವನ ಅಭಿವೃದ್ಧಿಪಡಿಸಬೇಕು. ಕೆ.ಎಸ್.ಟಿ.ಡಿ.ಸಿಯಿಂದ ಪಿಕ್ ನಿಕ್ ಸ್ಪಾಟ್ ಕಲ್ಪಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಅರಣ್ಯ ಇಲಾಖೆ ಮತ್ತು ಕೆ.ಎಸ್.ಟಿ.ಡಿ.ಸಿ ಜಂಟಿ ಸುಪರ್ದಿ ಹೊಂದಿವೆ.

ಲಕ್ಷ್ಮಣರಾವ್ ವರದಿಯಲ್ಲಿನ ಜೀವಂತ ಕೆರೆಗಳಲ್ಲಿ ಬಳ್ಳಾರಿ ರಸ್ತೆ ಮತ್ತು ಹಳೇ ಮದ್ರಾಸ್ ರಸ್ತೆ ಭಾಗ ಹಾಗೂ ಹಳೇ ಮದ್ರಾಸ್ ರಸ್ತೆ ಮತ್ತು ಹೊಸೂರು ರಸ್ತೆ ಮಧ್ಯಭಾಗದಲ್ಲಿರುವ ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಯ ಕೆರೆಗಳ ಮಾಹಿತಿ, ಹೊಸೂರು ರಸ್ತೆ ಮತ್ತು ಮೈಸೂರು ರಸ್ತೆ ನಡುವಿನ ಕೆರೆಗಳ ವಿವರ, ಹಾಗೂ ಮೈಸೂರು ರಸ್ತೆ ಮತ್ತು ತುಮಕೂರು ರಸ್ತೆ ನಡುವಿನ ಕೆರೆಗಳ ವಿವರ ನೀಡಲಾಯಿತು. ಮತ್ತು ಇಲ್ಲಿಯವರೆಗೆ ತುಮಕೂರು ರಸ್ತೆ ಮತ್ತು ಬಳ್ಳಾರಿ ರಸ್ತೆ ನಡುವಿನ ಕೆರೆಗಳ ಚಿತ್ರಣ ನೀಡಲಾಯಿತು.

(ಮುಂದುವರಿಯಲಿದೆ)

ಚಿತ್ರ-ಲೇಖನ: ಕೆರೆ ಮಂಜುನಾಥ್

Share on FacebookTweet about this on TwitterShare on LinkedIn

Leave a Reply

Your email address will not be published. Required fields are marked *


*